ಭಟ್ಕಳ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಮೃತ್ಯು
Update: 2017-11-08 20:14 IST
ಭಟ್ಕಳ, ನ. 8: ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ ರಾ.ಹೆ.66ರಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ನಾಗೇಶ್ ಖಾರ್ವಿ (64) ಎಂದು ಗುರುತಿಸಲಾಗಿದೆ.
ಭಟ್ಕಳಕ್ಕೆ ಸಮೀಪ ಮಂಕಿಯ ಹೆದ್ದಾರಿಯಲ್ಲಿ ಬೈಕ್ ಚಾಲಕ ನಾಗೇಶ್ ಕಾಸರಗೋಡಿಗೆ ಪ್ರಯಾಣಿಸುತ್ತಿದ್ದು, ಈ ಸಂದರ್ಭ ಕಾರೊಂದು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಸ್ಥಳೀಯ ಸಮಾಜ ಸೇವಕ ಝಾಕಿರ್ ಮತ್ತು ಫಹೀಮ್ ಶಿಂಗೇರಿ ಅವರ ಸಹಾಯದಿಂದ ಮಂಕಿ ಠಾಣೆ ಪೊಲೀಸರು ಮೃತದೇಹವನ್ನು ಹೊನ್ನಾವರ ಆಸ್ಪತ್ರೆಗೆ ಸಾಗಿಸಿದ್ದಾರೆ.
ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.