×
Ad

ಬಡ್ಡಿ ವ್ಯವಹಾರ: ಆರೋಪಿಯ ಬಂಧನ

Update: 2017-11-10 18:18 IST

ಬೆಂಗಳೂರು, ನ.10: ಪರವಾನಿಗೆ ಅವಧಿ ಮುಗಿದಿದ್ದರೂ ನಿಯಮಗಳನ್ನು ಉಲ್ಲಂಘಿಸಿ ಹಣಕಾಸಿನ ದುಬಾರಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಚಿಕ್ಕಮಾವಳ್ಳಿ ವೆಂಕಟಪ್ಪಬೀದಿಯ ನಿವಾಸಿ ಶಂಕರನಾರಾಯಣ(58) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. 

ಮನೆಯೊಂದರಲ್ಲಿ ಪರವಾನಿಗೆ ಅವಧಿ ಮುಗಿದಿದ್ದರೂ ನಿಯಮಗಳನ್ನು ಉಲ್ಲಂಘಿಸಿ ಹಣಕಾಸಿನ ದುಬಾರಿ ಬಡ್ಡಿ ವ್ಯವಹಾರ ನಡೆಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯಿಂದ ವಿವರ ನಮೂದಿಸದ ಚೆಕ್‌ಗಳು, ಸಹಿ ಮಾಡದ ಖಾಲಿ ಇರುವ ಆನ್ ಡಿಮ್ಯಾಂಡ್ ಪ್ರಾಮಿಸರಿ ನೋಟ್, ಹಣ ಸಂದಾಯ ರಶೀದಿ ನಮೂನೆಗಳು ಮತ್ತು ಈ ಸ್ಟಾಂಪ್ ಪೇಪರ್ ಇತ್ಯಾದಿಗಳನ್ನು ವಶಪಡಿಸಿಕೊಂಡು, ಇಲ್ಲಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News