ನ.11 ರಿಂದ ದ್ವಿತೀಯ ಅಧಿವೇಶನ ಇಲಾಖೆ ಪರೀಕ್ಷೆ ಆರಂಭ

Update: 2017-11-10 14:37 GMT

ಬೆಂಗಳೂರು, ನ.10: ಕರ್ನಾಟಕ ಲೋಕಸೇವಾ ಆಯೋಗವು 2017 ನೆ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಹೊಸದಿಲ್ಲಿಯಲ್ಲಿ ನಡೆಯಲಿವೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಹೊಸದಿಲ್ಲಿಯಲ್ಲಿ ನ.11 ರಿಂದ 13 ರವರೆಗೆ, ಬೆಂಗಳೂರು, ಬೆಳಗಾವಿ, ವಿಜಯಪುರ, ಗದಗ ಹಾಗೂ ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು, ಶಿವಮೊಗ್ಗ ಕೇಂದ್ರಗಳು ಹಾಗೂ ಹೊಸದಿಲ್ಲಿ ಕೇಂದ್ರದಲ್ಲಿ ನ.15 ರಿಂದ 23 ರವರೆಗೆ ಹಾಗೂ ನ.25 ರಿಂದ 30 ರವರೆಗೆ ಬೆಂಗಳೂರು ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿದೆ.

ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಆಯೋಗದ ವೆಬ್‌ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News