ಚಿಕ್ಕಮಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಬಂಧನ, ಬಿಡುಗಡೆ
Update: 2017-11-10 23:34 IST
ಚಿಕ್ಕಮಗಳೂರು, ನ.10: ರಾಜ್ಯ ಸರಕಾರ ಆಚರಿಸುತ್ತಿರುವ ಟಿಪ್ಪುಜಯಂತಿಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಕಪ್ಪುಪಟ್ಟಿಯನ್ನು ಧರಿಸಿ ಪ್ರತಿಭಟನೆಯನ್ನು ನಡೆಸಿದರು.
ಪ್ರತಿಭಟನೆ ಪ್ರಾರಂಭವಾಗುತ್ತಿದ್ದಂತೇಯೇ ಶಾಸಕ ಸಿ.ಟಿ.ರವಿ ಸೇರಿದಂತೆ ನೂರಾರೂ ಬಿಜೆಪಿ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದರು. ನಂತರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಕ್ತಾರ ವರಸಿದ್ದಿ ವೇಣುಗೋಪಾಲ್, ತಮ್ಮಯ್ಯ, ಪ್ರೇಂಕುಮಾರ್, ಚೈತ್ರಾಶ್ರೀ ಮತ್ತಿತರರಿದ್ದರು.