ಆರೋಪಿ ಸಂತೋಷ್ ವಿರುದ್ಧ ಸಾಕ್ಷ್ಯಗಳಿದ್ದರೆ ಹೈಕೋರ್ಟ್ಗೆ ಸಲ್ಲಿಸಲು ಸರಕಾರಿ ವಕೀಲರಿಗೆ ಸೂಚನೆ
Update: 2017-11-14 16:33 GMT
ಬೆಂಗಳೂರು, ನ.14: ಬಿಜೆಪಿ ಕಾರ್ಯಕರ್ತ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎನ್.ಆರ್.ಸಂತೋಷ್ ವಿರುದ್ಧ ಸಹ ಆರೋಪಿಗಳ ಹೇಳಿಕೆಗಳನ್ನು ಹೊರತುಪಡಿಸಿ ಬೇರೆ ಸಾಕ್ಷಾ ಧಾರಗಳಿದ್ದರೆ ಮುಂದಿನ ವಿಚಾರಣೆ ವೇಳೆ ಸಲ್ಲಿಸಲು ಸರಕಾರಿ ಪರ ವಕೀಲರಿಗೆ ಹೈ ಕೋರ್ಟ್ ಮಂಗಳವಾರ ಸೂಚಿಸಿದೆ.
ಪ್ರಕರಣ ರದ್ದು ಕೋರಿ ಎನ್.ಆರ್.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ನ್ಯಾಯಪೀಠ ಈ ಆದೆೀಶ ನೀಡಿತು.
ಸಂತೋಷ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಲಂ 143, 232, 325, 363, 511, 331, 120(ಬಿ) ಅಡಿ ಮೊಕದ್ದಮೆ ದಾಖಲಾಗಿದೆ.
ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಲಾಗಿದೆ.