ಚಿಕ್ಕಮಗಳೂರು : ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗಲು ಜಿಲ್ಲಾಧಿಕಾರಿ ಸೂಚನೆ

Update: 2017-11-17 15:15 GMT

ಚಿಕ್ಕಮಗಳೂರು, ನ.17: ಖಾಸಗಿ ವೈದ್ಯರು ಮುಷ್ಕರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆ ಸಿಗದೆ ತೀವ್ರವಾದ ತೊಂದರೆಯಿಂದಾಗಿ ಸಾರ್ವಜನಿಕರು ನರಳುತ್ತಿದ್ದು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಕೆ.ಪಿ.ಎಂ.ಇ ಕಮಿಟಿ ಅಧ್ಯಕ್ಷರೂ ಹಾಗೂ ಜಿಲ್ಲಾಧಿಕಾರಿ ಎಂ.ಕೆ ಶ್ರೀರಂಗಯ್ಯ ಸೂಚಿಸಿದ್ದಾರೆ.

ಕರ್ತವ್ಯಕ್ಕೆ ಹಾಜರಾಗದೇ ಇದ್ದರೆ, ನಿಮ್ಮ ಖಾಸಗಿ ವೈದ್ಯಕೀಯ ಸಂಸ್ಥೆಗೆ ನೀಡಲಾಗಿರುವ ನೋಂದಣಿಯನ್ನು ಸೆಕ್ಷನ್ 15ರಡಿ ರದ್ದುಗೊಳಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News