ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ರಿಗೆ ಇಂದಿರಾ ಶಾಂತಿ ಪ್ರಶಸ್ತಿ

Update: 2017-11-19 04:30 GMT

ಹೊಸದಿಲ್ಲಿ, ನ.19: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರಿಗೆ 2017ನೇ ಸಾಲಿನ ಇಂದಿರಾ ಗಾಂಧಿ ಶಾಂತಿ, ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿ ಘೋಷಿಸಲಾಗಿದೆ. 2004ರಿಂದ 2014ರವರೆಗೆ ದೇಶಕ್ಕೆ ನೀಡಿದ ಸಮರ್ಥ ನಾಯಕತ್ವವನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಘೋಷಿಸಿದೆ.

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನೇತೃತ್ವದ ಅಂತಾರಾಷ್ಟ್ರೀಯ ತೀರ್ಪುಗಾರರ ಮಂಡಳಿ ಈ ಆಯ್ಕೆ ಮಾಡಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಸುಮನ್ ದುಬೆ ಪ್ರಕಟನೆಯಲ್ಲಿ ಹೇಳಿದ್ದಾರೆ.

"ಅವರು ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆಯನ್ನು ಹೆಚ್ಚಿಸಿ, ನೆರೆಯ ದೇಶಗಳ ಜತೆಗೆ ಮತ್ತು ವಿಶ್ವದ ಪ್ರಮುಖ ದೇಶಗಳ ಜೊತೆ ಹೊಂದಿದ್ದ ಉತ್ತಮ ಬಾಂಧವ್ಯವನ್ನು ಕೂಡಾ ಪರಿಗಣಿಸಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಂಬಿಕೆ, ಜಾತಿ, ಧರ್ಮ ಅಥವಾ ಭಾಷೆಯ ಭೇದವಿಲ್ಲದೇ ಎಲ್ಲ ಜನಸಾಮಾನ್ಯರ ಭದ್ರತೆ ಮತ್ತು ಕಲ್ಯಾಣಕ್ಕೆ ಅವರು ಹೊಂದಿದ್ದ ಬದ್ಧತೆ ಮುಖ್ಯವಾದದ್ದು" ಎಂದು ಪ್ರಕಟನೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News