ಗೋ ಮಧುಸೂದನ್ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

Update: 2017-11-19 06:50 GMT

ಮಡಿಕೇರಿ, ನ.19: ಭಾರತದ ಸಂವಿಧಾನದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಅವಮಾನ ಎಸಗಿರುವ ಬಿಜೆಪಿ ವಕ್ತಾರ ಗೋ ಮಧುಸೂದನ್ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿ, ಬಂಧಿಸಬೇಕೆಂದು ಎಸ್‌ಡಿಪಿಐ ಒತ್ತಾಯಿಸಿದೆ.

ಖಾಸಗಿ ವಾಹಿನಿಯೊಂದರ ಚರ್ಚಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಮಧುಸೂದನ್, ಭಾರತೀಯ ಸಂವಿಧಾನದಲ್ಲಿ ಬರೆದಿರುವುದು ತಪ್ಪು, ಸಂವಿಧಾನವನ್ನು ಒಪ್ಪಲ್ಲ ಎಂದು ಹೇಳುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಎಸ್‌ಡಿಪಿಐ, ಸಂವಿಧಾನದಡಿಯಲ್ಲಿ ಎಲ್ಲಾ ಸೌಲಭ್ಯವನ್ನು ಪಡೆದು ಸಂವಿಧಾನಕ್ಕೆ ಅವಮಾನ ಮಾಡಿರುವುದು ದೇಶದ್ರೋಹವಾಗಿದ್ದು, ಸರಕಾರ ಕೂಡಲೇ ಆತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಪಕ್ಷೊ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News