ಪೌರ ಕಾರ್ಮಿಕರಿಗೆ ಸೀರೆ ಹಂಚಿ ಇಂದಿರಾ ಗಾಂಧಿ ಜಯಂತಿ ಆಚರಣೆ

Update: 2017-11-19 16:18 GMT

ಬೆಂಗಳೂರು, ನ.19: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಎನ್‌ಎಸ್‌ಯುಐ ಕಾರ್ಯಕರ್ತರು ಪೌರ ಕಾರ್ಮಿಕರಿಗೆ ಸೀರೆ ಹಂಚಿದರು.

ರವಿವಾರ ಇಲ್ಲಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂರು ಪೌರ ಕಾರ್ಮಿಕರಿಗೆ ಎನ್‌ಎಸ್‌ಯುಐ ಕಾರ್ಯಕರ್ತರು ಪೌರ ಕಾರ್ಮಿಕರಿಗೆ ಸೀರೆ, ತಿಂಡಿ ಹಂಚಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯ ಶುಭಾ ಕೋರಿದರು.

ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಮಂಜುನಾಥ್, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಶತಮಾನದ ಇತಿಹಾಸ ಹಿನ್ನಲೆಯುಳ್ಳ ಪಕ್ಷ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುಟುಂಬ ತ್ಯಾಗ, ಬಲಿದಾನವನ್ನು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿದರು.

ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿ ಲತಾ, ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ್, ಬಾಬು ಸೇರಿ ಪ್ರಮುಖರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News