ನ.25ರಂದು ಸಾರಿಗೆ ಅದಾಲತ್

Update: 2017-11-20 13:44 GMT

ಬೆಂಗಳೂರು, ನ.20: ನಗರದ ಯಶವಂತಪುರದಲ್ಲಿರುವ ಬೆಂಗಳೂರು ಉತ್ತರ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನ.15ರಂದು ಮಧ್ಯಾಹ್ನ 3ಕ್ಕೆ ‘ಸಾರಿಗೆ ಅದಾಲತ್’ ಕಾಯರ್ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸದರಿ ಕಾರ್ಯಕ್ರಮದಲ್ಲಿ ಈ ಕಚೇರಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿ ಕಾನೂನು ರೀತ್ಯ ಸೂಕ್ತ ಪರಿಹಾರಗಳನ್ನು ಸೂಚಿಸಲಾಗುವುದು ಹಾಗೂ ಈ ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳವಂತೆ ಉಪಸಾರಿಗೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News