ಮಾಜಿ ಶಾಸಕ ಬಾಕಿಲ ಹುಕ್ರಪ್ಪ ನಿಧನಕ್ಕೆ ಸಿಎಂ ಶೋಕ

Update: 2017-11-20 15:57 GMT

ಬೆಂಗಳೂರು, ನ.20: ಮಾಜಿ ಶಾಸಕ ಬಾಕಿಲ ಹುಕ್ರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಕ ವ್ಯಕ್ತಪಡಿಸಿದ್ದಾರೆ.

ರಬ್ಬರ್ ತೋಟದಲ್ಲಿ ದಿನಗೂಲಿ ಕಾರ್ಮಿಕರಾಗಿದ್ದ ಹುಕ್ರಪ್ಪ ಜನಪ್ರತಿನಿಧಿಯಾಗಿ ವಿಧಾನ ಸಭೆಯನ್ನು ಪ್ರವೇಶಿಸಿದ್ದು, ಪ್ರಜಾಪ್ರಭುತ್ವದ ಸೊಬಗನ್ನು ಸೂಚಿಸುತ್ತದೆ.

ಬಾಕಿಲ ಹುಕ್ರಪ್ಪ ಬಡವರ ಪ್ರತಿನಿಧಿಯಾಗಿದ್ದರು. ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಸರಳತೆ ಮೈಗೂಡಿಸಿಕೊಂಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News