ಎಸ್ಸೆಸ್ಸೆಫ್ ದ.ಕ ಜಿಲ್ಲಾ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಪ್ರಚಾರ ಸಭೆ

Update: 2017-11-20 17:22 GMT

ಮಂಗಳೂರು, ನ. 20: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ನ. 25 ರಂದು ಮಧ್ಯಾಹ್ನ 2 ಗಂಟೆಯಿಂದ ಮಂಗಳೂರಿನ ಜ್ಯೋತಿ ಸರ್ಕಲ್‌ನಿಂದ ನೆಹರು ಮೈದಾನ ತನಕ ನಡೆಯುವ ಇಲ್ ಹಬೀಬ್ ಮೀಲಾದ್ ರ್ಯಾಲಿ ಹಾಗೂ ನಂತರ ನೆಹರೂ ಮೈದಾನದಲ್ಲಿ ನಡೆಯುವ ಹುಬ್ಬುರ್ರಸೂಲ್ ಕಾನ್ಫರೆನ್ಸ್‌ನ ಪ್ರಚಾರ ಸಭೆಯು ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಬಿ.ಸಿ ರೋಡ್‌ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್, ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಕಾರ್ಯದರ್ಶಿ ಶರೀಫ್ ನಂದಾವರ, ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ವ್ಯಾಪ್ತಿಯ 10 ಡಿವಿಷನ್‌ಗಳಿಂದ ಸುಮಾರು 2 ಸಾವಿರ ರೈಟ್ ಟೀಮ್‌ನ ಸದಸ್ಯರು ಹಾಗೂ ಇತರ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಿವಿಷನ್ ನಾಯಕರಿಗೆ ಮಾಹಿತಿಯನ್ನು ನೀಡಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಲಂದರ್ ಪದ್ಮುಂಜ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News