ಪ್ರತ್ಯೇಕ ಪ್ರಕರಣ: ಇಬ್ಬರು ರೈತರು ಆತ್ಮಹತ್ಯೆ

Update: 2017-11-22 13:43 GMT

ಮದ್ದೂರು, ನ.22: ತಾಲೂಕಿನಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಸಾಲ ಬಾಧೆಯಿಂದ ಬುಧವಾರ ಮತ್ತಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕೆಸ್ತೂರು ಠಾಣೆ ವ್ಯಾಪ್ತಿಯ ಯರಗನಹಳ್ಳಿ ಚಿಕ್ಕೇಗೌಡ ಅವರ ಪುತ್ರ ಶಿವಣ್ಣ (63) ಹಾಗೂ ಬೆಸಗರಹಳ್ಳಿ ಠಾಣೆ ವ್ಯಾಪ್ತಿಯ ಹೊಂಬಾಳೆಗೌಡನದೊಡ್ಡಿ  ಕೆಂಪಯ್ಯ ಅವರ ಪುತ್ರ ರವಿ ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ.

ಶಿವಣ್ಣ ಅವರಿಗೆ 30 ಗುಂಟೆ ಜಮೀನಿದ್ದು, ಕೃಷಿ ಚಟುವಟಿಕೆಗೆ ಹೆಮ್ಮನಹಳ್ಳಿ ಸಿಂಡಿಕೇಟ್ ಬ್ಯಾಂಕ್‍ನಲ್ಲಿ 1.25 ಲಕ್ಷ ರೂ., ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 30 ಸಾವಿರ ರೂ. ಹಾಗೂ ಎರಡು ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಸಾಲಗಾರರ ಕಾಟ ತಾಳದೆ ಶಿವಣ್ಣ ಮಂಗಳವಾರ ಸಂಜೆ ವಿಷ ಕುಡಿದು ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರವಿ ಸ್ವಸಹಾಯ ಸಂಘದಲ್ಲಿ 2 ಲಕ್ಷ ರೂ., ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ 1 ಲಕ್ಷ ರೂ. ಹಾಗೂ 2 ಲಕ್ಷ ರೂ. ಖಾಸಗಿ ಕೈ ಸಾಲ ಪಡೆದಿದ್ದು, ಬುಧವಾರ ಬೆಳಗ್ಗೆ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ್ತರು ಪೊಲೀಸರಿಗೆ ದೂರ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News