ಹಾದಿಯಾ ಪ್ರಕರಣ: ತುರ್ತು ರಹಸ್ಯ ವಿಚಾರಣೆಗೆ ಸುಪ್ರೀಂ ನಿರಾಕರಣೆ

Update: 2017-11-22 14:21 GMT

ಹೊಸದಿಲ್ಲಿ, ನ. 22: ಇಸ್ಲಾಂಗೆ ಮತಾಂತರಗೊಂಡು ಬಳಿಕ ಮುಸ್ಲಿಂ ಯುವಕನನ್ನು ವಿವಾಹವಾದ ಕೇರಳ ಮೂಲದ ಮಹಿಳೆ ಹಾದಿಯಾ ಪ್ರಕರಣದ ತುರ್ತು ರಹಸ್ಯ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

 ಹಾದಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನವೆಂಬರ್ 27ರಂದು ಈ ರಹಸ್ಯ ವಿಚಾರಣೆ ಮನವಿಯ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯ ಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವರನ್ನೊಳಗೊಂಡ ಪೀಠ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News