ಸರಗಳ್ಳತನ ಪ್ರಕರಣ: ನಾಲ್ವರ ಬಂದನ

Update: 2017-11-23 14:42 GMT

ಬೆಂಗಳೂರು, ನ.23: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 14ಲಕ್ಷ ರೂ.ಮೌಲ್ಯದ 500 ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳುವಲ್ಲಿ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೈಸೂರು ನಗರದ ಮಂಡಿ ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಪರ್ಹಾಝ್ ಖಾನ್(25), ನೂರ್ ಮೊಹಮ್ಮದ್(26) ಹಾಗೂ ಬೆಂಗಳೂರಿನ ಕನಕ ನಗರದ ಸೈಯದ್ ಹಬೀಬ್(21), ಅಮೃತ ನಗರ ಮುಖ್ಯರಸ್ತೆಯ ನಿವಾಸಿ ಸೈಯದ್ ತಬ್ರೇಝ್ ಬಂಧಿತ ಆರೋಪಿಗಳು ಎಮದು ಗುರುತಿಸಲಾಗಿದೆ.

ಈ ಆರೋಪಿಗಳು ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಒಟ್ಟು 14 ಸುಲಿಗೆ ಮತ್ತು ದರೋಡೆ ಪ್ರಕರಣಗಳು ಮತ್ತು ಒಂದು ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News