ನ.25ರಂದು ಮಂಗಳೂರಿನಲ್ಲಿ ಹುಬ್ಬುರ್ರಸೂಲ್ ಕಾನ್ಫರೆನ್ಸ್

Update: 2017-11-24 05:13 GMT

ಮಂಗಳೂರು, ನ.24: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನ.25ರಂದು ಸಂಜೆ 4ಕ್ಕೆ ನಗರದ ನೆಹರೂ ಮೈದಾನದಲ್ಲಿ ಹುಬ್ಬುರ್ರಸೂಲ್ ಕಾನ್ಫರೆನ್ಸ್ ನಡೆಯಲಿದೆ. ಕಾರ್ಯಕ್ರಮಕ್ಕೆ ಮುನ್ನ ಅಪರಾಹ್ನ 2ರಿಂದ ನಗರದ ಜ್ಯೋತಿ ಸರ್ಕಲ್‌ನಿಂದ ಕಾರ್ಯಕ್ರಮ ನಡೆಯುವ ಮೈದಾನದವರೆಗೆ ಇಲ್ ಹಬೀಬ್ ಮೀಲಾದ್ ರ್ಯಾಲಿ ನಡೆಯಲಿದೆ.

ಹುಬ್ಬುರ್ರಸೂಲ್ ಕಾನ್ಫರೆನ್ಸ್‌ನ್ನು ಶೈಖುನಾ ಖಾಝಿ ಬೇಕಲ್ ಉಸ್ತಾದ್ ಉದ್ಘಾಟಿಸಲಿರುವರು. ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಅಧ್ಯಕ್ಷತೆ ವಹಿಸುವರು. ಇಲಲ್ ಹಬೀಬ್ ಮೀಲಾದ್ ರ್ಯಾಲಿಗೆ ಎಸ್.ಎಂ.ರಶೀದ್ ಹಾಜಿ ಧ್ವಜಾ ಹಸ್ತಾಂತರಿಸುವ ಮೂಲಕ ಚಾಲನೆ ನೀಡುವರು. ಎಸ್.ಎಂ.ಎ. ರಾಜ್ಯಾಧ್ಯಕ್ಷ ಸೈಯದ್ ತಂಙಳ್ ಉಜಿರೆ ದುಆಗೈಯುವರು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯೀಲ್ ಸಖಾಫಿ ಕೊಂಡಂಗೇರಿ ಸಂದೇಶ ಭಾಷಣ ಮಾಡುವರು.

ಕಾರ್ಯಕ್ರಮದಲ್ಲಿ ಹುಸೈನ್ ಸಅದಿ ಕೆ.ಸಿ.ರೋಡ್, ಎಸ್.ವೈ.ಎಸ್. ರಾಜ್ಯಾಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಎಂ.ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಕೆ.ಕೆ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ ಸುರಿಬೈಲ್, ಮುಮ್ತಾಝ್ ಅಲಿ ಕೃಷ್ಣಾಪುರ, ಯೆನೆಪೊಯ ಅಬ್ದುಲ್ಲ ಕುಂಞಿ, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ನಾವುಂದ, ಅಶ್ರಫ್ ಸಅದಿ ಮಲ್ಲೂರು, ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಮುಹಮ್ಮದ್ ಸಅದಿ ವಳವೂರು, ಉಸ್ಮಾನ್ ಸಅದಿ ಪಟ್ಟೋರಿ, ಕೆ.ಎಚ್.ಇಸ್ಮಾಯೀಲ್ ಸಅದಿ ಕಿನ್ಯ, ಇಸ್ಹಾಕ್ ಝುಹ್ರಿ ಕಾನಕೆರೆ, ಇಸ್ಮಾಯೀಲ್ ಸಅದಿ ಉರುಮಣೆ, ಅಬ್ದುಲ್ ರಹ್ಮಾನ್ ಹಾಜಿ ಪ್ರಿಂಟೆಕ್, ಅಶ್ರಫ್ ಕಿನಾರೆ, ಕತರ್ ಬಾವಾ ಹಾಜಿ, ಏಷ್ಯನ್ ಬಾವ ಹಾಜಿ, ಹನೀಫ್ ಹಾಜಿ ಉಳ್ಳಾಲ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News