ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸಲೀಂ ಬರಿಮಾರು ಆಯ್ಕೆ
Update: 2017-11-24 08:54 GMT
ಬಂಟ್ವಾಳ, ನ. 24: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನಾಲ್ಕನೇ ಅವಧಿಯ ಸದಸ್ಯರಾಗಿ ಸಲೀಂ ಬರಿಮಾರು ಅವರು ಆಯ್ಕೆಯಾಗಿದ್ದಾರೆ.
ಸಚಿವ ಬಿ. ರಮಾನಾಥ ರೈ ಅವರ ಶಿಫಾರಸಿನಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಜೆ. ಅನ್ನಪೂರ್ಣ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ.
ಬರಿಮಾರು ನಿವಾಸಿಯಾಗಿರುವ ಸಲೀಂ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು, ಸಾಮಾಜಿಕ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.