ಭಟ್ಕಳ: ನ. 25ರಿಂದ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾವಳಿ

Update: 2017-11-24 11:32 GMT

ಭಟ್ಕಳ, ನ. 24: ತಾಲೂಕಿನ ಪರಶುರಾಮ ಸ್ಪೋರ್ಟ್ಸ್ ಕ್ಲಬ್  ಉತ್ತರಕನ್ನಡ, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಕಬಡ್ಡಿ  ನ.25ರಿಂದ ಎರಡು ದಿನಗಳ ಕಾಲ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾವಳಿಯನ್ನು ಸಾಗರ ರಸ್ತೆಯ ಶ್ರೀ ಗುರು ಸುಧೀಂದ್ರ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ವೆಂಕಟೇಶ್ ದೇವಾಡಿಗ ಹೇಳೀದರು.

ಅವರು ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಉತ್ತರಕನ್ನಡ, ಶಿವಮೊಗ್ಗ, ಉಡುಪಿ ಜಿಲ್ಲೆಗಳ 30 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಉತ್ತರಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಆಟಗಾರರಿಗೆ ಆಯಾ ತಾಲೂಕು ತಂಡಗಳಿಂದಲೇ ಸ್ಪರ್ಧಿಸಬೇಕೆಂಬ ನಿಯಮವನ್ನು ರೂಪಿಸಲಾಗಿದೆ. ಪಂದ್ಯಾವಳಿ ವಿಜೇತ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದ ತಂಡಗಳಿಗೆ ಕ್ರಮವಾಗಿ, ರು.30,000, ರು.20,000 ಹಾಗೂ ರು.10,000 ಮತ್ತು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಗುವುದು ಎಂದು ಅವರು ಉತ್ತಮ ರೈಡರ್ ಹಾಗೂ ಕ್ಯಾಚರ್‌ಗೂ ವಿಶೇಷ ಬಹುಮಾನವನ್ನು ನೀಡಲಾಗುತ್ತದೆ ಎಂದರು.

ಶಾಸಕ ಮಂಕಾಳು ವೈದ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಜಿ ಶಾಸಕ ಜೆ.ಡಿ.ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ನೀಲಗೋಡು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಮಾದೇವ ಸ್ವಾಮಿ ಕ್ರೀಡಾಂಗಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ರಾಜೇಶ ನಾಯಕ, ಜಿಪಂ ಸದಸ್ಯ ಆಲ್ಬರ್ಟ ಡಿಕೋಸ್ತಾ, ಬೆಂಗಳೂರಿನ ಈ.ಜೆ.ಜೈನ್ ಗ್ರೂಪ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರಂಜನ್ ಜೈನ್, ಸುನಿಲ್.ಬಿ.ನಾಯ್ಕ, ವಿನೋದ ನಾಯ್ಕ ರಾಯಲ್‌ಕೇರಿ, ಕುಮಟಾ ಡಯಟ್ ಉಪನ್ಯಾಸಕ ದೇವಿದಾಸ ಮೊಗೇರ, ತಾಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ವಿಷ್ಣು ದೇವಡಿಗ, ನಾಮಧಾರಿ ಸಮಾಜದ ಅಧ್ಯಕ್ಷ ಎಮ್.ಆರ್.ನಾಯ್ಕ ಮೊದಲಾದವರು ಉಪಸ್ಥಿತರಿರಲಿದ್ದಾರೆ.

ನ.26ರಂದು ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಜೆ.ಡಿ.ನಾಯ್ಕ ವಹಿಸುತ್ತಿದ್ದು, ನಾಗಯಕ್ಷೆ ಧರ್ಮದರ್ಶಿ ರಾಮದಾಸ ಪ್ರಭು ಬಹುಮಾನ ವಿತರಣೆ ಮಾಡಲಿದ್ದಾರೆ.

ಉಡುಪಿ ಜಿಪಂ ಮಾಜಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಉದ್ಯಮಿ ಮಂಜುನಾಥ ನಾಯ್ಕ ಅಂಕೋಲಾ, ಗ್ರಾಪಂ ಸದಸ್ಯೆ ಶಿವಾನಿ ಶಾಂತಾರಾಮ ಭಟ್ಕಳ, ಉದ್ಯಮಿ ರಾಜೇಶ ನಾಯಕ್, ಕೆಎಸ್ಸಾರ್ಟಿಸಿ ಅಧಿಕಾರಿ ರಾಜೇಶ ಹುದ್ದಾರ್, ಅಮ್ಯೆಚುರ್ ಕಬಡ್ಡಿ ಅಸೋಶಿಯೇಶನ್ ಕರ್ನಾಟಕ ಇದರ ಉಪಾಧ್ಯಕ್ಷ ಸೂರಜ್ ನಾಯ್ಕ ಸೋನಿ, ಬೆಂಗಾಲ ವಾರಿಯರ್ಸನ ಕೋಚ್ ಜಗದೀಶ ಕುಂಬ್ಳೆ, ಪತ್ರಕರ್ತ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್, ಭಟ್ಕಳ ಪುರಸಭಾ ಅಧ್ಯಕ್ಷ ಮಟ್ಟಾ ಸಾದೀಕ್, ಇನಾಯತುಲ್ಲಾ ಶಾಬಂದ್ರಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಭಟ್ಕಳ ತಾಲೂಕು ಕಬಡ್ಡಿ ಫೆಡರೇಷನ್ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ, ತಂಝೀಮ್ ಮುಖಂಡ ಇನಾಯತುಲ್ಲಾ ಶಾಬಂದ್ರಿ, ಗಣೇಶ ಎಮ್.ಎಚ್., ಗಣೇಶ ಸೋಮಯ್ಯ ನಾಯ್ಕ, ಭಾಸ್ಕರ ನಾಯ್ಕ, ಮನೋಹರ ಮತ್ತಿತರರು  ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News