ಕೋಡಿಂಬಾಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2017-11-28 11:13 GMT

ಪತ್ತೂರು, ನ. 28: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.

ಕೋಡಿಂಬಾಡಿ ನಿವಾಸಿ ಜಯಪ್ರಕಾಶ್ ಶೆಟ್ಟಿ (41) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಜಯಪ್ರಕಾಶ್ ಶೆಟ್ಟಿ ಕೋಡಿಂಬಾಡಿಯಲ್ಲಿ ಕ್ಯಾಂಟೀನ್ ನಡೆಸಿಕೊಂಡಿದ್ದರು. ಕೆಲವು ಸಮಯಗಳಿಂದ ಅನಾರೋಗ್ಯದಿಂದ ಮತ್ತು ಸಾಲದಿಂದಾಗಿ ನೊಂದು ಮನೆಯ ಸಮೀಪದ  ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಾಯಿ, ಪತ್ನಿ, ಪುತ್ರ ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News