ಮಂಜುನಾಥ್ ಅಮರ್ ರಹೇ...

Update: 2017-11-28 17:54 GMT

ಛತ್ತಿಸಗಡ-ಮಹಾರಾಷ್ಟ್ರ ಗಡಿಯ ಗಡಚಿರೊಳ್ಳಿಯಲ್ಲಿ ನಡೆದಿದ್ದ ನಕ್ಸಲ್ ಕೂಬಿಂಗ್ ವೇಳೆ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದ ಯೋಧ ಮಂಜುನಾಥ ಜಕ್ಕಣ್ಣವರ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಅವರ ಊರಾದ ಧಾರವಾಡ ತಾಲೂಕಿನ ಮನಗುಂಡಿ ಗ್ರಾಮಕ್ಕೆ ತರಲಾಯಿತು. ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮಧ್ಯಾಹ್ನ ಮನಗುಂಡಿ ಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor