×
Ad

ಡಿ.3ರಂದು ಕೃಷಿ ಶಿಕ್ಷಣ ದಿನಾಚರಣೆ: ವಿದ್ಯಾರ್ಥಿಗಳಿಗೆ ಕೃಷಿ ಕಾರ್ಯಾಗಾರ

Update: 2017-11-29 18:28 IST

ಮಂಗಳೂರು, ನ.29: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ವತಿಯಿಂದ ಡಿ.3ರಂದು ನಗರದ ಮೀನುಗಾರಿಕಾ ಕಾಲೇಜಿನಲ್ಲಿ ಕೃಷಿ ಶಿಕ್ಷಣ ದಿನಾಚರಣೆ ಆಯೋಜಿಸಲಾಗಿದೆ.

ಭಾರತದ ಮೊದಲ ಕೃಷಿ ಸಚಿವ ಮತ್ತು ಸ್ವತಂತ್ರ ಭಾರತದ ಮೊದಲ ರಾಷ್ಟ ಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕೃಷಿ ಕ್ಷೇತ್ರದ ವಿವಿಧ ವಿಷಯಗಳನ್ನು ಮತ್ತು ದೇಶದ ಅಭಿವೃದ್ಧಿಯ ಪ್ರಸ್ತುತತೆಗೆ ಶಾಲೆಗಳನ್ನು ಒಳಗೊಂಡಂತೆ ವಿದ್ಯಾರ್ಥಿಗಳಿಗೆ ಬಹಿರಂಗಪಡಿಸುವುದು. ಅವರನ್ನು ಕೃಷಿಯ ಕಡೆಗೆ ಪ್ರೀರೇಪಿಸಿ ಮತ್ತು ಆರ್ಕಷಿಸಿ ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳುವುದು. ತಮ್ಮ ಶಿಕ್ಷಣದಲ್ಲಿ ವೃತ್ತಿಪರ ಜೀವನವನ್ನು ಅಳವಡಿಸಿಕೊಂಡು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಅಥವಾ ಭವಿಷ್ಯದಲ್ಲಿ ಕೃಷಿ ಉದ್ಯಮಿ ಹಾಗೂ ಉದ್ಯಮಶೀಲರಾಗುವುದು ಇದರ ಈ ಕಾರ್ಯಾಗಾರದ ಮುಖ್ಯ ಗುರಿಯಾಗಿದೆ.

ಡಿ.3ರಂದು ಬೆಳಗ್ಗೆ ಮೀನುಗಾರಿಕಾ ಕಾಲೇಜಿನ ಪ್ರೊ. ಎಚ್.ಪಿ.ಸಿ. ಶೆಟ್ಟಿ ಸಭಾಂಗಣದಲ್ಲಿ ಭಾರತದಲ್ಲಿ ಕೃಷಿ ವಿಜ್ಞಾನ ಶಿಕ್ಷಣದ ಮಹತ್ವ ಮತ್ತು ಅವಕಾಶಗಳು ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 8 ರಿಂದ 10ನೆ ತರಗತಿಯ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಲಾಗಿದೆ. ಪ್ರತಿ ಶಾಲೆಯಿಂದ 4 ರಿಂದ 5 ವಿದ್ಯಾರ್ಥಿಗಳು ಭಾಗವಹಿಸಬಹುದು. ಅಂದು ಬೆಳಗ್ಗೆ 9 ಗಂಟೆಯಿಂದ 9.30 ರವರೆಗೆ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುವುದು.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಂ. ಶಿವಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಳಿಗೆ ಮೀನುಗಾರಿಕಾ ಕಾಲೇಜಿನ ಅಸೋಸಿಯೇಟ್ ಪ್ರೊ.ಡಾ.ಎ.ಟಿ. ರಾಮಚಂದ್ರ ನಾಯ್ಕ ಅವರನ್ನು (ದೂರವಾಣಿ ಸಂಖ್ಯೆ: 99169 24084 ಅಥವಾ ಇಮೇಲ್:atrnaik@rediffmail.com ನ್ನು) ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News