ಕರ್ತವ್ಯದಲ್ಲಿದ್ದ ಡಿವೈಎಸ್ಪಿ ಶೇಖ್ ಹುಸೈನ್ ಹೃದಯಾಘಾತದಿಂದ ಮೃತ್ಯು

Update: 2017-12-01 09:36 GMT

ಚಿಕ್ಕಮಗಳೂರು, ಡಿ.1: ನರಸಿಂಹರಾಜಪುರ ತಾಲೂಕು ಕೇಂದ್ರದಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಕರ್ತವ್ಯದಲ್ಲಿ ತೊಡಗಿದ್ದ ಡಿವೈಎಸ್ಪಿ ಶೇಖ್ ಹುಸೈನ್(56) ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನ ಹೊಂದಿದ್ದಾರೆ.

ಮೂಲತಃ ಹಾಸನದವರಾದ ಶೇಖ್ ಹುಸೈನ್ ಚಿಕ್ಕಮಗಳೂರು ಜಿಲ್ಲೆಯ ರಾಜ್ಯ ಗುಪ್ತ ದಳದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಿನ್ನೆಯಿಂದ ಇಂದು ಬೆಳಗ್ಗೆ ತನಕ ಕರ್ತವ್ಯದಲ್ಲಿದ್ದ ಶೇಖ್ ಹುಸೈನ್ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News