‘ಬಸವ ರಾಷ್ಟ್ರೀಯ ಪುರಸ್ಕಾರ’ಕ್ಕೆ ಪಾಟೀಲ್ ಪುಟ್ಟಪ್ಪ ಆಯ್ಕೆ

Update: 2017-12-04 17:13 GMT

ಬೆಂಗಳೂರು, ಡಿ. 4: ಹಿರಿಯ ಪತ್ರಕರ್ತ ಡಾ.ಪಾಟೀಲ್ ಪುಟ್ಟಪ್ಪ ಅವರನ್ನು ರಾಜ್ಯ ಸರಕಾರದಿಂದ ನೀಡುವ ಪ್ರತಿಷ್ಠಿತ ‘ಬಸವ ರಾಷ್ಟ್ರೀಯ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್ ಇವರ ಅಧ್ಯಕ್ಷತೆಯ ಆಯ್ಕೆ ಸಮಿತಿ, ಪಾಟೀಲ್ ಪುಟ್ಟಪ್ಪ ಅವರ ಹೆಸರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲೆ ಪ್ರಕಟಿಸಲಾಗುವುದು ಎಂದು ಉಮಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News