×
Ad

ಪುತ್ತೂರು : ಸಾಕ್ಷಿದಾರನಿಗೆ ಬೆದರಿಕೆ - ದೂರು

Update: 2017-12-06 18:55 IST

ಪುತ್ತೂರು,ಡಿ.6 : ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಗಳವಾರ  ಪುತ್ತೂರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಬಂದಿದ್ದ ಸಾಕ್ಷಿದಾರರೊಬ್ಬರಿಗೆ ಮೂವರು ಸೇರಿಕೊಂಡು ಅವಾಚ್ಯ ಶಬ್ಧಗಳಿಂದ ಬೈದು ಸಾಕ್ಷಿ ಹಿಂದಕ್ಕೆ ಪಡೆಯುವಂತೆ ಬೆದರಿಸಿದ ಕುರಿತು ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. 

ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಟ್ಟಿನೋಪಿನಡ್ಕ ಸಮೀಪದ ಇಡಿಂಚಿಲ ನಿವಾಸಿ ಸೂಫಿ ಬ್ಯಾರಿ ಅವರ ಪುತ್ರ ರಶೀದ್ (29) ಅವರು ನೀಡಿರುವ ದೂರಿನಂತೆ ಒಳಮೊಗ್ರು ಗ್ರಾಮದ ಕುಂಬ್ರ ಪರಿಸರದವರಾದ ಸಲಾಂ,ರಫೀಕ್ ಮತ್ತು ಆಶಿಕ್ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. 

ತಾನು ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಗಳವಾರ ಸಾಕ್ಷಿ ನುಡಿಯಲು ಪುತ್ತೂರು ನ್ಯಾಯಾಲಯಕ್ಕೆ ಬಂದಿದ್ದು, ನ್ಯಾಯಾಲಯದ ಆವರಣದ ಬಳಿ ತನ್ನನ್ನು ತಡೆದು ನಿಲ್ಲಿಸಿದ ಆರೋಪಿಗಳು ನೀನು ಸಾಕ್ಷಿಯನ್ನು ಹಿಂದಕ್ಕೆ ಪಡೆಯಬೇಕು, ಇಲ್ಲದಿದ್ದಲ್ಲಿ ನಿನ್ನ ಕೈಕಾಲು ಮುರಿಯುವುದಾಗಿ ಬೆದರಿಕೆಯೊಡ್ಡಿ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿ ರಶೀದ್ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. 
ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News