×
Ad

ಮೈಸೂರು-ಬೆಂಗಳೂರು ರಸ್ತೆಯಲ್ಲಿ ಬೈಕ್ ಅಪಘಾತ: ಸವಾರ ಸಾವು

Update: 2017-12-07 19:28 IST

ಮೈಸೂರು,ಡಿ.7: ಮೈಸೂರು-ಬೆಂಗಳೂರು ರಸ್ತೆಯಲ್ಲಿ ಬೈಕ್ ಸವಾರನೋರ್ವ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತರನ್ನು ಕುಶಾಲನಗರ ಟಿಬೆಟಿಯನ್ ಕಾಲನಿಯ ತೆಂಜಿನ್ ಖೆಂಟ್ಸೆ (26) ಎಂದು ಗುರುತಿಸಲಾಗಿದೆ. ಇವರು ಬನ್ನಿಮಂಟಪದ ಬಳಿ ಬಾಡಿಗೆಗೆ ರೂಂ ಪಡೆದು ವಾಸವಿದ್ದರು. ಅಲ್ಲಿಯೇ ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದರು.

ಗುರುವಾರ ಮುಂಜಾನೆ ಬನ್ನಿ ಮಂಟಪದ ಬಳಿ ಬೈಕ್ ನಲ್ಲಿ ತೆರಳುವಾಗ ಮಂಜುಕವಿದ ವಾತಾವರಣವಿತ್ತು. ರಸ್ತೆಯಲ್ಲಿರುವ ಹಂಪ್ಸ್ ನೋಡದೇ ವೇಗವಾಗಿ ಚಾಲನೆ ಮಾಡಿಕೊಂಡು ಹೋದ ಪರಿಣಾಮ ವಿದ್ಯುತ್ ಕಂಬಕ್ಕೆ ಬಡಿದು ಸಾವನ್ನಪ್ಪಿದ್ದಾರೆ.

ಎನ್ ಆರ್.ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News