ಪರಪ್ಪನ ಅಗ್ರಹಾರದಲ್ಲಿ ಕೈದಿಯ ನಿಗೂಢ ಸಾವು

Update: 2017-12-07 16:24 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.7: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ನಗರದ ಕಮ್ಮನಹಳ್ಳಿ ನಿವಾಸಿ ಉಲ್ಲಾಸ್ ಕುಮಾರ್(43) ಮೃತಪಟ್ಟಿರುವ ಕೈದಿ ಎಂದು ಪೊಲೀಸರು ತಿಳಿಸಿದ್ದಾರೆ.

ಉಲ್ಲಾಸ್ ಕುಮಾರ್ ಬುಧವಾರ ಮಧ್ಯಾಹ್ನ ಜೈಲಿನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ, ಕಾರಣ ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಲೆ ಪ್ರಕರಣ ಆರೋಪದ ಮೇಲೆ ನ.29ರಂದು ಉಲ್ಲಾಸ್ ಕುಮಾರ್ ಜೈಲು ಸೇರಿದ್ದ. ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News