×
Ad

ಶೈಕ್ಷಣಿಕ ಪ್ರಗತಿಯಿಂದ ಅಪಾರ ಸಾಧನೆ ಸಾಧ್ಯ : ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯ

Update: 2017-12-08 21:37 IST

ಮಡಿಕೇರಿ ಡಿ.8 :ಶೈಕ್ಷಣಿಕ ಸಾಧನೆಯಿಂದ ದೇಶದ ಅಭಿವೃದ್ಧಿಯ ದಿಕ್ಕನ್ನೇ ಬದಲಾಯಿಸಬಹುದೆಂದು ಅಭಿಪ್ರಾಯಪಟ್ಟಿರುವ ಶಾಸಕ ಕೆ.ಜಿ.ಬೋಪಯ್ಯ, ವಿದ್ಯಾರ್ಥಿಗಳು ಪೋಷಕರಿಗೆ ಹಾಗೂ ಗುರುಹಿರಿಯರಿಗೆ ಗೌರವ ನೀಡುವ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣದಲ್ಲಿ ಶಿಕ್ಷಕರ ಜಾವಬ್ದಾರಿ ಬಹಳ ಮುಖ್ಯ. ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಉತ್ತಮ ಮಟ್ಟಕ್ಕೆ ತಲುಪಬೇಕು ಎಂದು ತಿಳಿಸಿದರು.

ಉತ್ತಮ ಮಟ್ಟದ ಶಿಕ್ಷಣ ಮತ್ತು ಸಂಘಟನೆ ಎರಡು ಬಹಳ ಮುಖ್ಯ. ಶಿಕ್ಷಣದಲ್ಲಿ ನಮ್ಮ ಜಿಲ್ಲೆ ಉತ್ತಮ ಸ್ಥಾನಕ್ಕೆ ತಲುಪಬೇಕು ಎಂದು ಹೇಳಿದರು.

ಶಾಸಕರಾದ ಸುನಿಲ್ ಸುಬ್ರಮಣಿ ಅವರು ಮಾತನಾಡಿ ಶಿಕ್ಷಕರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಆಧುನಿಕ ನೆಲಗಟ್ಟಿನಲ್ಲಿ ಶಿಕ್ಕಕರು ಸಮಾಜವನ್ನು ತಿದ್ದಬೇಕು ಮತ್ತು ಗುರುಗಳಿಗೆ ವಿದ್ಯಾರ್ಥಿಗಳು ವಿಧೇಯಕರಾಗಿರಬೇಕು ಎಂದು ಕೆ.ಜಿ.ಬೋಪಯ್ಯ ಸಲಹೆ ನೀಡಿದರು.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಾತನಾಡಿ ಜ್ಞಾನದ ಬೆಳವಣಿಗೆಗೆ ಜ್ಞಾನ ದೇಗುಲವನ್ನು ಶಿಕ್ಷಕರು ಸ್ಥಾಪನೆ ಮಾಡಬೇಕು. ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಗಮನ ಹರಿಸಬೇಕು. ನಾವು ಬೇರೆಯವರಿಗೆ ಮಾರ್ಗದರ್ಶಕರಾಗಬೇಕು ಎಂದು ತಿಳಿಸಿದರು.

ನಮ್ಮ ಚಿಂತನೆ ಕ್ರೀಯಾಶೀಲತೆಯಾಗಿರಬೇಕು. ಸೇವೆ ನಿಸ್ವಾರ್ಥವಾಗಿರಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ಜ್ಞಾನದ ಕಣಜವಾಗಿ ರೂಪಿಸಬೇಕು ಎಂದರು.

ಐ.ಎನ್.ಟಿ.ಯು.ಸಿ ಮತ್ತು ಸಮಾಜ ಸೇವಕರ ಸಂಘದ ಉಪಾಧ್ಯಕ್ಷರಾದ ನಾಪಂಡ ಮುತ್ತಪ್ಪ ಮಾತನಾಡಿ ಶಿಕ್ಷಕರಿಗೆ ಸಹನೆ, ಶಿಸ್ತು, ಸಂಯಮ ಬಹಳ ಮುಖ್ಯ ಎಂದು ತಿಳಿಸಿದರು.

ಕೊಡಗು ಜಿಲ್ಲಾ ವಿದ್ಯಾ ಇಲಾಖೆಯ ನೌಕರರ ಪ.ಸೌ. ಬ್ಯಾಂಕ್‍ನ ಅಧ್ಯಕ್ಷರಾದ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ಹಿಂದೆ ಗುರುಗಳಿಗೆ ಅವರದೆ ಆದ ಗೌರವ ಇತ್ತು, ಅದರೆ ಇಂದು ಪರಿಸ್ಥಿತಿ ಬದಲಾಗಿದೆ. ಶಿಕ್ಷಕ ಸಮೂಹ ಸಂಘಟನೆಯನ್ನು ಒಂದು ಕುಟುಂಬದಂತೆ ನೋಡಿಕೊಳ್ಳಬೇಕು. ನಮಗೆ ಸಮಸ್ಯೆ ಬಂದಾಗ ಅದನ್ನು ನಾವೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆ.ಎಂ.ಭವಾನಿ, ಸಂತ ಜೋಸೆಫರ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಶೋಭಾ ಡಿಸೋಜ, ಪ.ಪೂ.ಕಾ.ಉಪನ್ಯಾಸಕರುಗಳ ಸಂಘದ ಅಧ್ಯಕ್ಷರಾದ ಸಿ.ಎನ್.ವಿಶ್ವನಾಥ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್, ಸಂತ ಜೋಸೆಫರ ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕರು ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News