ಪತ್ನಿಗೆ ಹಲ್ಲೆ: ವ್ಯಕ್ತಿಯ ಬಂಧನ

Update: 2017-12-08 17:12 GMT

ಶಿವಮೊಗ್ಗ, ಡಿ. 8: ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ತನ್ನ ಪತ್ನಿಯ ಮೇಲೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನಗೆರೆಯ ಕುಮಾರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಗಾಯಾಳು ಮಹಿಳೆಯನ್ನು ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ. ಹಲ್ಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News