ಸಿಎಫ್‌ಐನಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ‘ವಿಚಾರ ಸಂಕಿರಣ’

Update: 2017-12-09 17:56 GMT

ಮಂಗಳೂರು, ಡಿ. 9: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ‘ಸಾರ್ವಜನಿಕ ಶಿಕ್ಷಣ ಎದುರಿಸುತ್ತಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣವು ಶನಿವಾರ ಮಂಗಳೂರಿನ ಸಹೋದಯ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವಿಷಯ ಮಂಡನೆ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಉಮೇಶ್ ಚಂದ್ರ ಮಾತನಾಡಿ, ವಸಾಹತುಶಾಹಿ ವಿರೋಧಿ ನೆಪವನ್ನಿಟ್ಟುಕೊಂಡು ಭಾರತೀಯ ಶಿಕ್ಷಣ ನೀತಿಯನ್ನು ಕೇಸರೀಕರಣ ಮಾಡಲಾಗುತ್ತಿದೆ ಎಂದರು.

ಶ್ರೀ ರಂಗಪಟ್ಟಣ ಪ್ರಥಮ ದರ್ಜೆ ಕಾಲೆಜು ಸಹಪ್ರಾಧ್ಯಾಪಕ ಡಾ. ಮುಸ್ತಫಾ ಮಾತನಾಡಿ, ಪ್ರಸಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ವಿಮರ್ಶಾತ್ಮಕ ಚಿಂತನೆಯನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದರು.

ಕ್ಯಾಂಪಸ್ ಫ್ರಂಟ್ ರಾಷ್ಟ್ರಾಧ್ಯಕ್ಷ ಪಿ. ಶುಹೈಬ್ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವಿಚಾರ ಮಂಡಿಸಿದರು. ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ತಪ್ಸೀರ್ ವಹಿಸಿದ್ದರು.

ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾಧ್ಯಕ ಅತಾವುಲ್ಲ ಉಪಸ್ಥಿತರಿದ್ದರು. ಫಯಾಝ್ ದೊಡ್ಡಮನೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News