ಮಾರಕಾಸ್ತ್ರಗಳಿಂದ ದಾಳಿ: ವ್ಯಾಪಾರಿಯ ಕೊಲೆ

Update: 2017-12-10 13:43 GMT

ಬೆಂಗಳೂರು, ಡಿ. 10: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಾಪಾರಿಯೊಬ್ಬನನ್ನು ಕೊಲೆಗೈದಿರುವ ದುರ್ಘಟನೆ ಇಲ್ಲಿನ ಕೆ.ಆರ್.ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  ನಗರದ ಕಲಾಸಿಪಾಳ್ಯದ ಕೆ.ಆರ್.ಮಾರುಕಟ್ಟೆಯ ಕೊತ್ತಂಬರಿ ಸೊಪ್ಪುವ್ಯಾಪಾರಿ ಶ್ರೀನಿವಾಸ್ ಯಾನೆ ಸೀನ(28) ಕೊಲೆಯಾಗಿರುವ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.

ಶನಿವಾರ ಮಧ್ಯರಾತ್ರಿ ನಗರದ ಕಲಾಸಿಪಾಳ್ಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಶ್ರೀನಿವಾಸ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

 ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ಕೆ.ಆರ್.ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News