ಮರಕ್ಕೆ ಕಾರು ಢಿಕ್ಕಿ: ಮಹಿಳೆ ಮೃತ್ಯು
Update: 2017-12-10 16:43 GMT
ಕಾರ್ಕಳ, ಡಿ.10: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ತಡ ರಾತ್ರಿ ವೇಳೆ ನೀರೆ ಗ್ರಾಮದ ಬಾದಾಮಿ ಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಸುಶೀಲ ಎಸ್. ಭಂಡಾರ್ಕಾರ್ ಎಂದು ಗುರುತಿಸಲಾಗಿದೆ.
ಕಾರು ಚಾಲಕ ಡಾ. ಸತೀಶ ಭಂಡಾರ್ಕಾರ್ ಹಾಗೂ ಅವರ ಪತ್ನಿ ಸಂಜನ ಭಂಡಾರ್ಕಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಡಾ.ಸತೀಶ್ ತನ್ನ ಪತ್ನಿ ಹಾಗೂ ತಾಯಿ ಜೊತೆ ಕಾರಿನಲ್ಲಿ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಕಾರು ರಾತ್ರಿ 11ಗಂಟೆ ಸುಮಾರಿಗೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆಯಿತು. ಇದರಿಂದ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಶೀಲ ಭಂಡಾರ್ಕಾರ್ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.