ಉಡುಪಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರ ಸಭೆ

Update: 2017-12-11 14:55 GMT

ಉಡುಪಿ, ಡಿ.11: ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಕಾರ್ಯಕರ್ತರ ಸಭೆಯು ಇತ್ತೀಚೆಗೆ ಬಲಾಯಿಪಾದೆಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿ ವಠಾರ ದಲ್ಲಿ ಜರಗಿತು.

ಈ ಸಂದರ್ಭ ಜಿಲ್ಲಾಧ್ಯಕ್ಷರಾಗಿ ಒಂದು ವರ್ಷವನ್ನು ಪೂರೈಸಿದ ಯೋಗೀಶ್ ವಿ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ಜ.9 ರಂದು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯಲಿರುವ ಉಡುಪಿ-ದ.ಕ ಜಿಲ್ಲೆಯ ಜಂಟಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಬೇಕೆಂದು ಕರೆ ನೀಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಸಂಘ ಟನಾ ಕಾರ್ಯದರ್ಶಿ ಉದಯ ಹೆಗ್ಡೆ, ರಾಜ್ಯ ಕಾರ್ಯದರ್ಶಿ ಶೇಖರ್ ಕೋಟ್ಯಾನ್, ರಾಜ್ಯ ಜೊತೆ ಕಾರ್ಯದರ್ಶಿ ಗಂಗಾಧರ ಭಿರ್ತಿ, ಅಲ್ಪಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಲತೀಫ್ ದಾವೂದ್, ಉಪಾಧ್ಯಕ್ಷ ತಾರನಾಥ್ ಶೆಟ್ಟಿ, ಎಂ.ಎಚ್.ಬಿ ಮಹಮ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ ಆಚಾರ್ಯ, ನಿತಿನ್ ಶೆಟ್ಟಿ ಬೈಂದೂರು, ಜಿಲ್ಲಾ ವಕ್ತಾರ ಪ್ರದೀಪ್ ಬೈಲೂರು, ಜಿಲ್ಲಾ ಜೊತೆ ಕಾರ್ಯದರ್ಶಿ ಉದಯ ಆರ್.ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಬ್ದುಲ್ ಖಾದರ್ ಕುಂಜಾಲು, ಕಾರ್ಕಳ ಕ್ಷೇತ್ರಾಧ್ಯಕ್ಷರಾದ ವೇದವ್ಯಾಸ್ ನಾಯಕ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಅಬ್ದುಲ್ ರಝಾಕ್, ರಮೇಶ್ ಕುಂದಾ ಪುರ, ಸತೀಶ್ ಪೂಜಾರಿ, ಇಮ್ತಿಯಾಝ್, ಮುಖಂಡರಾದ ಪ್ರಶಾಂತ್ ಭಂಡಾರಿ, ಎಂ.ಎ.ಬಾವು, ಅನಿತಾ ಶೆಟ್ಟಿ, ಮನ್ಸೂರ್ ಇಬ್ರಾಹಿಂ, ಬಾಲಕೃಷ್ಣ ಆಚಾರ್ಯ, ರವಿರಾಜ್ ಸಾಲ್ಯಾನ್, ವಿನ್ಸೆಂಟ್ ಸುನಿಲ್, ರವಿ ಶೆಟ್ಟಿ, ಹುಸೇನ್ ಹೈಕಾಡಿ, ಮಹಮ್ಮದ್ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News