ಫರಂಗಿಪೇಟೆಯಲ್ಲಿ ಬಸ್‌ಗಳ ಮೇಲೆ ಕಲ್ಲು ತೂರಾಟ

Update: 2017-12-12 04:50 GMT

ಮಂಗಳೂರು, ಡಿ.12: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ‘ಸಾಮರಸ್ಯದ ನಡಿಗೆ’ ಆರಂಭಗೊಳ್ಳಲಿರುವ ಫರಂಗಿಪೇಟೆಯಲ್ಲಿ ರಾಜಹಂಸ ಸೇರಿದಂತೆ ಎರದು ಕೆಎಸ್ಸಾರ್ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ದುಷ್ಕರ್ಮಿಗಳು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಫರಂಗಿಪೇಟೆಯಿಂದ ಮಾಣಿಯವರೆಗೆ ನಡೆಯಲಿರುವ ಸಾಮರಸ್ಯದ ನಡಿಗೆಗೆ ಪೂರ್ವದಲ್ಲೇ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳು ಜಾಥಾಕ್ಕೆ ಆರಂಭದಲ್ಲೇ ವಿಘ್ನವನ್ನುಂಟು ಮಾಡಲು ಯತ್ನಿಸಿದ್ದಾರೆ.
 ಜಾಥಾಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಫರಂಗಿಪೇಟೆಯಲ್ಲಿ ಚಾಲನೆಗೊಳ್ಳಲಿದೆ. ಕಲ್ಲಡ್ಕ ಮಾರ್ಗವಾಗಿ ಸಾಗಲಿರುವ ಜಾಥಾಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಸಿಪಿಎಂ ಮುಖಂಡರು ಸಾಥ್ ನೀಡಲಿದ್ದಾರೆ. ಜಾಥಾದ ಹಿನ್ನೆಲೆಯಲ್ಲಿ 300 ಕೆ.ಎಸ್.ಆರ್.ಪಿ. ಸೇರಿದಂತೆ 1000ಕ್ಕೂ ಅಧಿಕ ಪೊಲೀಸರ ಭದ್ರತೆ ಒದಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News