ಲಾರಿಗಳ ನಡುವೆ ಢಿಕ್ಕಿ: ಇಬ್ಬರಿಗೆ ಗಾಯ
Update: 2017-12-12 15:15 GMT
ಬೆಂಗಳೂರು, ಡಿ.12: ಲಾರಿಗಳ ನಡುವೆ ಅಪಘಾತ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕುಮಾರಸ್ವಾಮಿ ಲೇಔಟ್ ನೈಸ್ ರಸ್ತೆಯ ಕನಕಪುರ ಟೋಲ್ ಬಳಿ ಈ ಘಟನೆ ನಡೆದಿದ್ದು, ಲಾರಿ ಚಾಲಕ ಅರುಣ್ ಹಾಗೂ ಕಾರ್ತಿಕ್ ಎಂಬುವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ರಸ್ತೆ ಕಡೆಗೆ ಮಂಗಳವಾರ ಬೆಳಗ್ಗೆ 8ರ ಸುಮಾರಿಗೆ ಹೋಗುತ್ತಿದ್ದ ಲಾರಿ ರಸ್ತೆ ವಿಭಜಕ ದಾಟಿ ಎದುರಿನ ರಸ್ತೆಗೆ ಸಾಗುತ್ತಿದ್ದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ರಭಸಕ್ಕೆ ಇಬ್ಬರು ಲಾರಿ ಚಾಲಕರು ಗಾಯಗೊಂಡರೆ, ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.
ಘಟನೆ ಸಂಬಂಧ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ದೌಡಾಯಿಸಿ ರಸ್ತೆ ಸಂಚಾರ ಸುಗಮಗೊಳಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.