ಡಿ.13ಕ್ಕೆ ಸನ್ನಡತೆಯ ಕೈದಿಗಳ ಅಕಾಲಿಕ ಬಿಡುಗಡೆ ಸಮಾರಂಭ
Update: 2017-12-12 16:41 GMT
ಬೆಂಗಳೂರು, ಡಿ. 12: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಆವರಣದಲ್ಲಿ ಡಿ.13ರ ಸಂಜೆ 4ಗಂಟೆಗೆ ಸನ್ನಡತೆ ಕೈದಿಗಳ ಅಕಾಲಿಕ ಬಿಡುಗಡೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಸಮಾರಂಭದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಸಂಸದ ಡಿ.ಕೆ.ಸುರೇಶ್ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸುಭಾಶ್ ಚಂದ್ರ, ಪ್ರಧಾನ ಕಾರ್ಯದರ್ಶಿ ಪಿ.ಕೆ. ಗರ್ಗ್, ಕಾರಾಗೃಹ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎನ್.ಎಸ್.ಮೇಘರಿಖ್, ಎಚ್.ಎಸ್.ರೇವಣ್ಣ ಪಾಲ್ಗೊಳ್ಳಿದ್ದು, ಶಾಸಕ ಎಂ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆಂದು ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.