ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಕನ್ನಡ ಶಾಲೆಗಳು ಬೆಳೆಯಬೇಕು: ಎಸ್.ಜಿ.ಸಿದ್ದರಾಮಯ್ಯ
Update: 2017-12-12 17:27 GMT
ಬೆಂಗಳೂರು, ಡಿ.12: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಚಕಾರವೆತ್ತಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಕನ್ನಡ ಶಾಲೆಗಳೂ ಸಹ ಬೆಳೆದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಮಲ್ಲೇಶ್ವರಂನ ಜಲ ಮಂಡಳಿಯ ರಜತ ಭವನದಲ್ಲಿ ಆಯೋಜಿಸಿದ್ದ 62ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಯನ್ನು ಎಲ್ಲರೂ ಬಳಸುವುದರ ಜೊತೆಗೆ ಅನ್ಯ ಭಾಷಿಗರಿಗೂ ಸಹ ಕನ್ನಡವನ್ನು ಕಲಿಸುವುದರ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಜಲಮಂಡಳಿಯ ಮುಖ್ಯ ಆಡಳಿತಾಧಿಕಾರಿ ಕೆ.ಎಚ್.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.