ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಶ್ರೀವಿದ್ಯಾ ನೇಮಕ
Update: 2017-12-13 12:08 GMT
ಮಡಿಕೇರಿ,ಡಿ.13 :ಕೊಡಗು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾಧಿಕಾರಿಯಾಗಿ ಶ್ರೀವಿದ್ಯಾ ಅವರನ್ನು ನೇಮಿಸಲಾಗಿದೆ.
ಡಾ.ಡಿಸೋಜ ಅವರು ಕೆಲವು ದಿನಗಳ ಹಿಂದೆಯಷ್ಟೆ ಭೂದಾಖಲೆಯ ಆದೇಶವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತರಾಟೆಗೆ ಒಳಗಾಗಿದ್ದರು. ಪ್ರಸ್ತುತ ಅವರನ್ನು ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀವಿದ್ಯಾ ಅವರನ್ನು ಕೊಡಗು ಜಿಲ್ಲೆಗೆ ವರ್ಗಾಯಿಸಲಾಗಿದೆ.
ಶ್ರೀವಿದ್ಯಾ ಅವರು 2010ರ ಐಎಎಸ್ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, 2013ರ ನ.16ರಿಂದ 2014ರ ಮೇ 20ರವರೆಗೆ (ಆರು ತಿಂಗಳು) ಅವರು ಕೊಡಗು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.