ಪರೇಶ್ ಮೇಸ್ತಾ ಪ್ರಕರಣ ಸಿಬಿಐಗೆ: ಗೃಹಸಚಿವ ರಾಮಲಿಂಗಾ ರೆಡ್ಡಿ

Update: 2017-12-13 12:44 GMT

ಬೆಂಗಳೂರು, ಡಿ.13: ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಪರೇಶ್ ಸಾವಿನ ಕುರಿತು ಬಿಜೆಪಿಯ ಕೆಲ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಎನ್ ಐಗೆ ಪ್ರಕರಣವನ್ನು ಹಸ್ತಾಂತರಿಸಬೇಕು ಎನ್ನುತ್ತಿದ್ದಾರೆ. ಈ ಹಿಂದೆಯೂ ಅವರು ಇಂತಹ ಆರೋಪಗಳನ್ನು ಮಾಡಿದ್ದರು. ಡಿ.ಕೆ.ರವಿ, ನಂದಿತಾ ಪ್ರಕರಣದಲ್ಲೂ ಇಂತಹ ಆರೋಪಗಳು ಕೇಳಿಬಂದಿತ್ತು ಎಂದವರು ಹೇಳಿದರು.

ಪರೇಶ್ ಮೇಸ್ತಾ ತಂದೆ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕರಣವನ್ನು ಸಿಬಿಒಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ನೀಡಲಾಗುವುದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News