ಟಿ. ಜಯಂತ ಕುಮಾರ್‌ಗೆ ‘ಯಕ್ಷಗುರು ಪ್ರಶಸ್ತಿ’

Update: 2017-12-13 14:18 GMT

ಉಡುಪಿ, ಡಿ.13: ದಶಮಾನೋತ್ಸವದ ಸಂಭ್ರಮದಲ್ಲಿರುವ ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷ ಶಿಕ್ಷಣದ ಗುರುಗಳಾಗಿದ್ದ ದಿ.ಯು. ದುಗ್ಗಪ್ಪ ಅವರ ಸ್ಮರಣಾರ್ಥ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ನೀಡಲಾಗುವ ‘ಯಕ್ಷಗುರು ಪ್ರಶಸ್ತಿ’ಗೆ ಈ ಬಾರಿ ಹಿರಿಯ ಯಕ್ಷಗಾನ ಗುರು ತೋನ್ಸೆ ಜಯಂತ ಕುಮಾರರನ್ನು ಆಯ್ಕೆ ಮಾಡಲಾಗಿದೆ.

ಡಿ.16ರ ಸಂಜೆ 6 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಯಕ್ಷಕಿಶೋರ ಸಂ್ರಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿಯು 10,000 ರೂ. ನಗದು, ಶಾಲು, ಸ್ಮರಣಿಕೆಗಳನ್ನು ಹೊಂದಿರುತ್ತದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಪ್ರಮೋದ್ ಮಧ್ವರಾಜ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News