ಭಟ್ಕಳ: ಕಾರಿನ ಚಕ್ರ ಕಳವು; ದೂರು ದಾಖಲು

Update: 2017-12-13 14:48 GMT

ಭಟ್ಕಳ, ಡಿ. 13: ಭಟ್ಕಳದ ಮಗ್ದೂಮ್ ಕಾಲನಿಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಲಾದ ಕಾರಿನ ನಾಲ್ಕೂ ಚಕ್ರಗಳನ್ನು ಕಳವು ಮಾಡಿದ ಬಗ್ಗೆ ವರದಿಯಾಗಿದೆ. 

ಇಲ್ಲಿನ ರೈಸ್ ಅರ್ಮಾರ್ ಎಂಬರಿಗೆ ಸೇರಿದ ಕಾರಿನ ಚಕ್ರಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News