ಕೇಂದ್ರ ಸಚಿವ ಹೆಗಡೆಯನ್ನು ಟೀಕಿಸುವ ಭರದಲ್ಲಿ ಮಂಗಳಮುಖಿಯರ ಅವಹೇಳನ ಮಾಡಿದ ಶಾಸಕ ಸೋಮಶೇಖರ್

Update: 2017-12-13 16:22 GMT

ಮೈಸೂರು,ಡಿ.13: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರನ್ನು ಟೀಕಿಸುವ ಭರದಲ್ಲಿ ಶಾಸಕ ಎಂ.ಕೆ. ಸೋಮಶೇಖರ್ ಎಡವಟ್ಟು ಮಾಡಿಕೊಂಡಿದ್ದಾರೆ. ಅನಂತ್ ಕುಮಾರ್ ಹೆಗಡೆ ಗೋಸುಂಬೆ ರಾಜಕಾರಣಿಯಾಗಿದ್ದು, ಶಿಖಂಡಿ ಮುಖ ಹೊಂದಿದ್ದಾರೆ ಎಂದ ಸೋಮಶೇಖರ್ ಮಂಗಳಮುಖಿಯರ ಅವಹೇಳನ ಮಾಡಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಕ್ಷಸ ಮುಖ ಹೊಂದಿದ್ದು, ಅವರೊಬ್ಬ ಪಾಪದ ಪಿಂಡ” ಎಂಬ ಅನಂತಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಸಂಸ್ಕೃತಿಯೇ ಗೊತ್ತಿಲ್ಲ. ಹಾಗಾಗಿ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರ ಮುಖ ಶಿಖಂಡಿ ಮುಖದ ಹಾಗಿದೆ” ಎಂದರು.

ಜಿಲ್ಲೆ-ಜಿಲ್ಲೆಗಳಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಸಂಸ್ಕೃತಿ ಇಲ್ಲದೆ ಮಾತನಾಡುತ್ತಿರುವ ಅವರಿಗೆ ಮುಂದಿನ ದಿನಗಳಲ್ಲಿ ಜನರೇ ಸಂಸ್ಕೃತಿಯನ್ನು ಕಲಿಸಲಿದ್ದಾರೆ ಎಂದು ಸೋಮಶೇಖರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಗರಪಾಲಿಕೆಯ ಸದಸ್ಯ ಸುನೀಲ್, ಮುಡಾ ಸದಸ್ಯ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News