ಅನಾರೋಗ್ಯದಿಂದ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Update: 2017-12-13 16:58 GMT

ಮೈಸೂರು,ಡಿ.13: ಅನಾರೋಗ್ಯದಿಂದ ಬೇಸತ್ತ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸರಸ್ವತಿಪುರಂನಲ್ಲಿರುವ ಜೆಎಸ್ ಎಸ್ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಮ್ಯಶ್ರೀ(17) ಎಂದು ಹೇಳಲಾಗಿದೆ. ಈಕೆ ಗಂಗೋತ್ರಿ ಬಡಾವಣೆಯ ಕುಮಾರ್ ಎಂಬವರ ಮಗಳಾಗಿದ್ದು ಹಲವು ದಿನಗಳಿಂದ ಅನಾರೋಗ್ಯ ಪೀಡಿತಳಾಗಿದ್ದಳು,ನಿನ್ನೆ ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಮಲಗಲು ತೆರಳಿದವಳು ಅಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. 

ಈ ಸಂಬಂಧ ಸರಸ್ವತಿಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News