ಶೀಘ್ರದಲ್ಲಿ ಕುಮಾರಸ್ವಾಮಿ ಹೊನ್ನಾವರಕ್ಕೆ ಭೇಟಿ

Update: 2017-12-13 17:02 GMT

ಮುಂಡಗೋಡ, ಡಿ. 13: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರೇಶ ಮೇಸ್ತಾನ ಕುಟುಂಬಕ್ಕೆ ಸಾತ್ವಾಂನ ಹೇಳಲು ಹೊನ್ನಾವರಕ್ಕೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮುನಾಫ ಮಿರ್ಜಾನಕರ ಪತ್ರಿಕೆಗೆ ತಿಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಇತ್ತಿಚಿಗೆ ಮೃತನಾದ ಪರೇಶ ಮೇಸ್ತಾ ಕುಟುಂಬಕ್ಕೆ ಸಾತ್ವಾಂನ ಹೇಳಲು ಬರಲಿದ್ದಾರೆ ಎಂದು ಅವರು ತಿಳಿಸಿದರು. ವಿಧಾನಸಭೆಯಲ್ಲಿ ಕಾರ್ಯಕಲಾಪಗಳಲ್ಲಿ ಭಾಗವಹಿಸುತ್ತಿರುವುದರಿಂದ ಹೊನ್ನಾವರಕ್ಕೆ ಭೇಟಿ ನೀಡಲು ಆಗಲಿಲ್ಲ ಎಂದು ತಿಳಿಸಿದ ಅವರು ಉತ್ತರಕನ್ನಡ ಜಿಲ್ಲೆ ಶಾಂತಿಗೆ ಹೆಸರುವಾಸಿಯಾಗಿದ್ದು, ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಷ್ಟ್ರೀಯ ಪಕ್ಷಗಳು ಕೋಮು ಗಲಭೆಗೆ ಕುಮ್ಮುಕ್ಕು ನೀಡಿ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಅವರು ಜಿಲ್ಲೆಯಲ್ಲಿ ನಡೆಯುತ್ತಿರವ ಕೋಮು ಗಲಭೆಗೆ ದುಃಖ ವ್ಯಕ್ತಪಡಿಸಿದ್ದಾರೆ. ಕೃತ್ಯಕ್ಕೆ  ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News