ರವಿ ಬೆಳಗೆರೆಗೆ ಮತ್ತೆ ಸಂಕಷ್ಟ: ಬಂಧನ ವಾರಂಟ್ ಜಾರಿ

Update: 2017-12-14 09:48 GMT

ಬೆಂಗಳೂರು, ಡಿ.14: ಕಳೆದ ಏಳು ವರ್ಷಗಳ ಹಿಂದೆ ಮಹಿಳೆಯೊಬ್ಬರ ವಿರುದ್ಧ ಮಾನಹಾನಿ ವರದಿ ಪ್ರಕಟಿಸಿದ ಆರೋಪದಲ್ಲಿ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿ ಬೆಳಗೆರೆಯವರಿಗೆ ಬಂಧನ ವಾರಂಟ್  ಜಾರಿಯಾಗಿದೆ.

ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದರು. ರವಿ ಬೆಳಗೆರೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದ್ದರೂ, ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ  ಬೆಂಗಳೂರಿನ ಮ್ಯಾಜಿಸ್ಟ್ರೇಟ್   ನ್ಯಾಯಾಲಯವು  ರವಿ ಬೆಳೆಗೆರೆಯನ್ನು ಬಂಧಿಸಿ ಹಾಜರುಪಡಿಸುವಂತೆ ಸಂಜಯ್ ನಗರ ಪೊಲೀಸರಿಗೆ ಆದೇಶ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News