×
Ad

ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Update: 2017-12-15 22:42 IST

ಮಂಗಳೂರು, ಡಿ.15: ರಾಷ್ಟ್ರೀಕೃತ ಬ್ಯಾಂಕೊಂದರ ನಿವೃತ್ತ ಉದ್ಯೋಗಿ, ಜೆಪ್ಪು ಮಾರ್ಕೆಟ್ ರಸ್ತೆಯ ನಿವಾಸಿ ಹರಿಶ್ಚಂದ್ರ ಅತ್ತಾವರ (69) ಎಂಬವರು ಶುಕ್ರವಾರ ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚರ್ಮರೋಗದಿಂದ ಬಳಲುತ್ತಿದ್ದ ಇವರು ಕಳೆದ 6 ವರ್ಷದಿಂದ ಚಿಕಿತ್ಸೆ ಮಾಡುತ್ತಿದ್ದರೂ ಫಲಕಾರಿಯಾಗದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರ ಏಕೈಕ ಪುತ್ರ ಉತ್ತರ ಭಾರತದಲ್ಲಿ ಉದ್ಯೋಗದಲ್ಲಿದ್ದು, ಮನೆಯಲ್ಲಿ ಪತ್ನಿಯ ಜೊತೆ ವಾಸವಾಗಿದ್ದರು. ಶುಕ್ರವಾರ ಮಧ್ಯಾಹ್ನ ಇವರ ಪತ್ನಿ ಹೊರಗೆ ಹೋದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News