ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಬೀದಿನಾಟಕ

Update: 2017-12-16 10:35 GMT

ಮಂಗಳೂರು, ಡಿ.16: ಮಂಗಳೂರು ನಗರ ಪೊಲೀಸ್, ಮಂಗಳೂರು ಕದ್ರಿ ಪೂರ್ವ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ಸಂತ ಆ್ಯಗ್ನೆಸ್ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಇಂದು ಬೀದಿ ನಾಟಕ ನಡೆಯಿತು.

ಕಂಕನಾಡಿ ಮಾರುಕಟ್ಟೆ ಮೈದಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ವಿದ್ಯಾರ್ಥಿಗಳಿಂದ ಜನಜಾಗೃತಿ ಮೂಡಿಸಲಾಯಿತು. ಈ ವೇಳೆ ಕದ್ರಿ ಠಾಣೆಯ ಎಸ್.ಐ. ಮಾರುತಿ ಎಸ್.ವಿ. ಮಾತನಾಡಿ, ಸರಕಳ್ಳತನ, ಅಪರಾಧ ಕೃತ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಎನ್‌ಎಸ್‌ಎಸ್ ಅಧಿಕಾರಿ ಡಾ.ಉದಯ್ ಕುಮಾರ್ ಮತ್ತಿತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News