ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸುರೇಶ್ ಕುಮಾರ್

Update: 2017-12-16 15:29 GMT

ಬೆಂಗಳೂರು, ಡಿ. 16: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಸಬಾರದೆಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವುದನ್ನು ನೋಡಿದರೆ ಚುನಾವಣೆಗೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಂತೆ ಕಾಣುತ್ತಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಟೀಕಿಸಿದ್ದಾರೆ.

ಗುಜರಾತ್ ಚುನಾವಣೆ ಫಲಿತಾಂಶದ ಪೂರ್ವ ಸಮೀಕ್ಷಾ ವರದಿಗಳನ್ನು ಗಮನಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಬಹುತೇಕ ಮುಖಂಡರು ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಗೆಲುವು ಗೋಡೆ ಬರಹದಷ್ಟೇ ಸ್ಪಷ್ಟ. ಆದರೆ, ರಾಜಕೀಯ ಜಯಅಪಜಯದ ಹೊರತಾಗಿಯೂ ಚುನಾವಣಾ ಸುಧಾರಣೆಗಳನ್ನು ಸ್ವಾಗತಿಸಬೇಕಾದವರೆ ಹಳೆಯ ಕಾಲದ ವ್ಯವಸ್ಥೆಗೆ ಜೋತುಬೀಳಲು ಆಸಕ್ತಿ ತೋರಿಸುತ್ತಿರುವುದು ವಿಷಾದದ ಸಂಗತಿ ಎಂದು ಅವರು ಸಿಎಂ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News