ಚಳ್ಳಕೆರೆ: 100ಕ್ಕೂ ಅಧಿಕ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Update: 2017-12-18 17:15 GMT

ಚಳ್ಳಕೆರೆ, ಡಿ.18: ನಗರದ ಗಾಂಧಿನಗರ ಹಾಗೂ ಅಂಬೇಡ್ಕರ್ ನಗರದ ವಿವಿಧ ಸಮುದಾಯದ 100ಕ್ಕೂ ಅಧಿಕ ಮಹಿಳೆಯರು ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಭಾಗ್ಯಮ್ಮ ಹಾಗೂ ತಾಲೂಕು ಮಹಿಳಾ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಶಾಸಕರ ಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

   ನಂತರ ಮಾತನಾಡಿದ ಅವರು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರು ಅಂಬೇಡ್ಕರ್ ಹಾಗೂ ಗಾಂಧಿನಗರದ ಗುಡಿಸಲು ನಿವಾಸಿಗಳಿಗೆ ಅಕ್ರಮ-ಸಕ್ರಮ ಹಾಗೂ ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ಬಡವರಿಗೆ ಆಸರೆಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವೆಲ್ಲರೂ ಶಾಸಕ ರಘುಮೂರ್ತಿಯವರಿಗೆ ಮತ ನೀಡಲಿದ್ದು ಪಕ್ಷದ ಪರವಾಗಿ ದುಡಿಯುತ್ತೇವೆ ಎಂದರು.

ಶಾಸಕ ಟಿ.ರಘುಮೂರ್ತಿ ಮಾತನಾಡಿ, ಅಲ್ಪಸಂಖ್ಯಾತ, ಬಡವರ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಹತ್ತು ಹಲವು ಭಾಗ್ಯಗಳನ್ನು ಜಾರಿಗೆ ತಂದು ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ನೀವು ಕಾಂಗ್ರೆಸ್ ಸರಕಾದ ಸಾಧನೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯವನ್ನು ಜನರಿಗೆ ತಲುಪಿಸಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಿಕ್ಕೆ ತರಬೇಕೆಂದು ಮನವಿ ಮಾಡಿದರು.

ತಾಲೂಕು ಮಹಿಳಾ ಘಟದ ಅಧ್ಯಕ್ಷ ಹಾಗೂ ಬಯಲು ಸೀಮೆ ಅಭಿವೃದ್ಧಿ ಸದಸ್ಯೆ ಗೀತಬಾಯಿ, ಜಿಲ್ಲಾ ಮಹಿಳಾ ಘಟದ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ, ನಗರಸಭೆ ಸದಸ್ಯೆ ಲಕ್ಷ್ಮೀದೇವಿ, ನಿವೃತ್ತ ಶಿಕ್ಷಕ ಅನ್ವರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ತಾಪಂ ಅಧ್ಯಕ್ಷ ಜಿ.ವೀರೇಶ್, ಎಪಿಎಂಸಿ ಅಧ್ಯಕ್ಷ ಸಿ.ಆರ್.ಶಿವಣ್ಣ, ಉಪಾಧ್ಯಕ್ಷ ದೊಡ್ಡರಂಗಪ್ಪ, ತಾಪಂ ಸದಸ್ಯ ಗಿರಿಯಪ್ಪ, ಶಕಿಲ, ಫಾತಿಮಾ, ಮಹಾಬುಬಿ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News