ರಸ್ತೆ ಅಪಘಾತ : ಓರ್ವ ಮೃತ್ಯು

Update: 2017-12-21 15:22 GMT

ನಾಗಮಂಗಲ, ಡಿ.21: ರಸ್ತೆಬದಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಬೊಲೆರೋ ವಾಹನ ಢಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೆ ಓರ್ವ ಸಾವನ್ನಪ್ಪಿ, ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಎ.ನಾಗತಿಹಳ್ಳಿ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.

ಬೊಲೆರೋ ವಾಹನದಲ್ಲಿದ್ದ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ತಮ್ಮಯ್ಯ(50) ಎಂಬ ವ್ಯಕ್ತಿಯೇ ಸಾವನ್ನಪ್ಪಿದವರಾಗಿದ್ದು, ಗಾಯಗೊಂಡಿರುವ ಚಾಲಕ ಹರೀಶ್ ಅವರನ್ನು ಬೆಳ್ಳೂರು ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೊಲೇರೋ ವಾಹನ ಎ.ನಾಗತಿಹಳ್ಳಿ ಗ್ರಾಮದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಿಂಡಿಗನವಿಲೆ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News