ಕಾನೂನು ಸುವ್ಯವಸ್ಥೆ ಬಗ್ಗೆ ಆದಿತ್ಯನಾಥ್ ನಮಗೆ ಪಾಠ ಹೇಳಿ ಕೊಡಬೇಕಿಲ್ಲ: ಸಿಎಂ ಸಿದ್ದರಾಮಯ್ಯ

Update: 2017-12-22 07:15 GMT

ಬೆಳಗಾವಿ, ಡಿ. 22: ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದಷ್ಟು ಎಲ್ಲಿಯೂ ಆಗಿಲ್ಲ. ಹೀಗಿರುವಾಗ ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ ಅವರು ಇಲ್ಲಿಗೆ ಬಂದು ನಮಗೆ ಪಾಠ ಹೇಳಬೇಕೇ ? ಕಾನೂನು ಸುವ್ಯವಸ್ಥೆ ಕುರಿತು ಅವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯತೆ ನಮಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಾರಿ ಅತಿಥಿ ಗೃಹದಲ್ಲಿ ರೈತ ಮುಖಂಡರ ಜೊತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಿ, ನಂತರ ಮಾತನಾಡಿದರು.

ನನ್ನ ಹೆಸರಿನಲ್ಲೇ ರಾಮ ಇದೆ. ನಾವು ಟಿಪ್ಪೂ ಜಯಂತಿ ಅಷ್ಟೇ ಅಲ್ಲ, ಹನುಮ ಜಯಂತಿ, ರಾಮನವಮಿಯನ್ನೂ ಮಾಡುತ್ತೇವೆ. ಜೊತೆಗೆ ಬಸವ, ವಾಲ್ಮೀಕಿ, ಕನಕದಾಸರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮ, ಅವರ ಜಯಂತಿಯನ್ನೂ ಮಾಡುತ್ತೇವೆ. ಇಷ್ಟಕ್ಕೂ ಕೋಮು ಗಲಭೆಯ ಸೃಷ್ಟಿಕರ್ತರೇ ಬಿಜೆಪಿಯವರು. ಅವರಿಂದ ನಾವು ಪಾಠ ಕಲಿಯಬೇಕೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News